26.3 C
ಪುತ್ತೂರು, ಬೆಳ್ತಂಗಡಿ
March 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

ಮೊಗ್ರು: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ.240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಮಾ.15 ರಂದು ಸ್ಥಳಕ್ಕೆ ಭೇಟಿ ನೀಡಿ, ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಬಂದಾರು ಪಂಚಾಯತ್ ಮಾಜಿ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ, ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ, ಹಿರಿಯರಾದ ರಾಮಣ್ಣ ಗೌಡ ವೈ ಏರ್ಮಾಳ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಪ್ರವೀಣ್ ಮತ್ತಿಲಾರು, ಅಶೋಕ ಗೌಡ ಬರುoಗುಡೆಲು, ಜಗದೀಶ್ ಗೌಡ ಅರ್ಬಿ, ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು, ಹಲವಾರು ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya
error: Content is protected !!