September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

​ಬೆಳ್ತಂಗಡಿ: ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ವಿಠಲ ಪೂಜಾರಿಯವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ನೂತನ ಸೌಲಭ್ಯಗಳನ್ನು ವೀಕ್ಷಿಸಿದರು.

ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿಶೇಷ ಅನುದಾನದಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ (Smart Class) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಡಿಜಿಟಲ್ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಒದಗಿಸಲಾಗಿದ್ದು, ಇದರ ಕಾರ್ಯನಿರ್ವಹಣೆ ಮತ್ತು ಉಪಯುಕ್ತತೆಯ ಬಗ್ಗೆ ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಠಲ ಪೂಜಾರಿ ಮಾತನಾಡಿ “ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಶಿಕ್ಷಣ ಲಭಿಸುವಂತಾಗಬೇಕು ಎನ್ನುವುದು ಪೂಜ್ಯ ಹೆಗ್ಗಡೆಯವರ ಆಶಯವಾಗಿದೆ. ಈ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯು ಮಕ್ಕಳ ಜ್ಞಾನಾರ್ಜನೆಗೆ ಹೊಸ ಆಯಾಮ ನೀಡಲಿದೆ,” ಎಂದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ವಿಭಾಗದ ತಾಲೂಕು ಸಮನ್ವಯಾಧಿಕಾರಿ ಮಧುರ, ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ, ಒಕ್ಕೂಟದ ಅಧ್ಯಕ್ಷ ದಯಾನಂದ, ಯಶೋಧ ಹಾಗೂ ಚರಣ್ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya
error: Content is protected !!