23.4 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಮಡಂತ್ಯಾರು ವೇ.ಮೂ. ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶ್ರೀ ನಾಗಬ್ರಹ್ಮ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.16ರಂದು ನಡೆಯಿತು.

ಮಾ.16ರಂದು ಬೆಳಿಗ್ಗೆ ನಿತ್ಯಪೂಜೆ, ಪ್ರಾರ್ಥನೆ, ಗೊನೆ ಮುಹೂರ್ತ ಉಗ್ರಾಣ ಮುಹೂರ್ತ, ತೋರಣ ಮುಹೂರ್ತ, ಶ್ರೀ ದೇವರಿಗೆ ಪುಣ್ಯಾಹ, ಗಣಹೋಮ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪಂಚವಿಂಷತಿ ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ತುಲಾಭಾರ ಸೇವೆ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಆಶ್ಲೇಷಾ ಬಲಿ ಸೇವೆ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಮಂಜುಶ್ರೀ ನಗರ ಮೇಲಂತಬೆಟ್ಟು ಮತ್ತು ಮೇಲಂತಬೆಟ್ಟು ಗ್ರಾಮದಾ ಮಹಿಳೆಯರಿಂದ ಭಜನಾ ಸೇವೆ, ಮಹಾರಂಗಪೂಜೆ, ದೈವಗಳಿಗೆ ಪರ್ವ ಸೇವೆ, ಹೂವಿನ ಪೂಜೆ, ರಾತ್ರಿ ಸಿರಿಕುಮಾರ ದರ್ಶನ ಮತ್ತು ಸಿರಿಕುಮಾರ ದೇವರ ಭೇಟಿ, ದೈವಗಳ ಭಂಡಾರ ಇಳಿಯುವುದು. ಶ್ರೀ ನಾಗಬ್ರಹ್ಮ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಕೊಡಮಣಿತ್ತಾಯ, ಮಲವ ಹಾಗೂ ವಾರಾಹಿ ದೈವಗಳ ನರ್ತನ ಸೇವೆ. ದೇವಸ್ಥಾನದಿಂದ ನಲ್ಕೆತ್ಯಾರು ಕಟ್ಟೆಯ ವರೆಗೆ ಚೆಂಡೆ, ಕೊಂಬು ವಾಲಗ, ವಾದ್ಯಗಳೊಂದಿಗೆ ದೇವರು ಹಾಗೂ ದೈವಗಳು ವಿಜೃಂಭಣೆಯ ಮೆರವಣಿಗೆ ನಡೆಯಲಿರುವುದು ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ದೇವರ ಮತ್ತು ದೈ ಭೇಟಿ ನಡೆಯಲಿದೆ.

ಮಾ.17ರಂದು ಬೆಳಿಗ್ಗೆ ಸಂಪ್ರೋಕ್ಷಣೆ ನಡೆಯಲಿದೆ.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya
error: Content is protected !!