32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಮಡಂತ್ಯಾರು ವೇ.ಮೂ. ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶ್ರೀ ನಾಗಬ್ರಹ್ಮ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.16ರಂದು ನಡೆಯಿತು.

ಮಾ.16ರಂದು ಬೆಳಿಗ್ಗೆ ನಿತ್ಯಪೂಜೆ, ಪ್ರಾರ್ಥನೆ, ಗೊನೆ ಮುಹೂರ್ತ ಉಗ್ರಾಣ ಮುಹೂರ್ತ, ತೋರಣ ಮುಹೂರ್ತ, ಶ್ರೀ ದೇವರಿಗೆ ಪುಣ್ಯಾಹ, ಗಣಹೋಮ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪಂಚವಿಂಷತಿ ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ತುಲಾಭಾರ ಸೇವೆ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಆಶ್ಲೇಷಾ ಬಲಿ ಸೇವೆ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಮಂಜುಶ್ರೀ ನಗರ ಮೇಲಂತಬೆಟ್ಟು ಮತ್ತು ಮೇಲಂತಬೆಟ್ಟು ಗ್ರಾಮದಾ ಮಹಿಳೆಯರಿಂದ ಭಜನಾ ಸೇವೆ, ಮಹಾರಂಗಪೂಜೆ, ದೈವಗಳಿಗೆ ಪರ್ವ ಸೇವೆ, ಹೂವಿನ ಪೂಜೆ, ರಾತ್ರಿ ಸಿರಿಕುಮಾರ ದರ್ಶನ ಮತ್ತು ಸಿರಿಕುಮಾರ ದೇವರ ಭೇಟಿ, ದೈವಗಳ ಭಂಡಾರ ಇಳಿಯುವುದು. ಶ್ರೀ ನಾಗಬ್ರಹ್ಮ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಕೊಡಮಣಿತ್ತಾಯ, ಮಲವ ಹಾಗೂ ವಾರಾಹಿ ದೈವಗಳ ನರ್ತನ ಸೇವೆ. ದೇವಸ್ಥಾನದಿಂದ ನಲ್ಕೆತ್ಯಾರು ಕಟ್ಟೆಯ ವರೆಗೆ ಚೆಂಡೆ, ಕೊಂಬು ವಾಲಗ, ವಾದ್ಯಗಳೊಂದಿಗೆ ದೇವರು ಹಾಗೂ ದೈವಗಳು ವಿಜೃಂಭಣೆಯ ಮೆರವಣಿಗೆ ನಡೆಯಲಿರುವುದು ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ದೇವರ ಮತ್ತು ದೈ ಭೇಟಿ ನಡೆಯಲಿದೆ.

ಮಾ.17ರಂದು ಬೆಳಿಗ್ಗೆ ಸಂಪ್ರೋಕ್ಷಣೆ ನಡೆಯಲಿದೆ.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!