29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಮಡಂತ್ಯಾರು ವೇ.ಮೂ. ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶ್ರೀ ನಾಗಬ್ರಹ್ಮ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.16ರಂದು ನಡೆಯಿತು.

ಮಾ.16ರಂದು ಬೆಳಿಗ್ಗೆ ನಿತ್ಯಪೂಜೆ, ಪ್ರಾರ್ಥನೆ, ಗೊನೆ ಮುಹೂರ್ತ ಉಗ್ರಾಣ ಮುಹೂರ್ತ, ತೋರಣ ಮುಹೂರ್ತ, ಶ್ರೀ ದೇವರಿಗೆ ಪುಣ್ಯಾಹ, ಗಣಹೋಮ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪಂಚವಿಂಷತಿ ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ತುಲಾಭಾರ ಸೇವೆ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಆಶ್ಲೇಷಾ ಬಲಿ ಸೇವೆ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಮಂಜುಶ್ರೀ ನಗರ ಮೇಲಂತಬೆಟ್ಟು ಮತ್ತು ಮೇಲಂತಬೆಟ್ಟು ಗ್ರಾಮದಾ ಮಹಿಳೆಯರಿಂದ ಭಜನಾ ಸೇವೆ, ಮಹಾರಂಗಪೂಜೆ, ದೈವಗಳಿಗೆ ಪರ್ವ ಸೇವೆ, ಹೂವಿನ ಪೂಜೆ, ರಾತ್ರಿ ಸಿರಿಕುಮಾರ ದರ್ಶನ ಮತ್ತು ಸಿರಿಕುಮಾರ ದೇವರ ಭೇಟಿ, ದೈವಗಳ ಭಂಡಾರ ಇಳಿಯುವುದು. ಶ್ರೀ ನಾಗಬ್ರಹ್ಮ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಕೊಡಮಣಿತ್ತಾಯ, ಮಲವ ಹಾಗೂ ವಾರಾಹಿ ದೈವಗಳ ನರ್ತನ ಸೇವೆ. ದೇವಸ್ಥಾನದಿಂದ ನಲ್ಕೆತ್ಯಾರು ಕಟ್ಟೆಯ ವರೆಗೆ ಚೆಂಡೆ, ಕೊಂಬು ವಾಲಗ, ವಾದ್ಯಗಳೊಂದಿಗೆ ದೇವರು ಹಾಗೂ ದೈವಗಳು ವಿಜೃಂಭಣೆಯ ಮೆರವಣಿಗೆ ನಡೆಯಲಿರುವುದು ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ದೇವರ ಮತ್ತು ದೈ ಭೇಟಿ ನಡೆಯಲಿದೆ.

ಮಾ.17ರಂದು ಬೆಳಿಗ್ಗೆ ಸಂಪ್ರೋಕ್ಷಣೆ ನಡೆಯಲಿದೆ.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!