May 2, 2026
Uncategorized

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಮಾ.14ರಂದು ನಡೆದ ಸಂಕ್ರಾಂತಿ ಪೂಜೆ ಹಾಗೂ ವಿಶೇಷ ರಂಗಪೂಜೆಯ ಸಂದರ್ಭದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ ಜಿ. ಇವರನ್ನು ಕ್ಷೇತ್ರದ ವತಿಯಿಂದ ಧರ್ಮದರ್ಶಿ ಯೋಗೀಶ್ ಪೂಜಾರಿ ಅವರು ಗೌರವಿಸಿದರು.
ನ್ಯಾಯವಾದಿ ಭಗೀರಥ ಜಿ. ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಅಂಕಾಜೆ ಲಾಯಿಲ ಅವರು ಮಾತನಾಡಿ, ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ಅವರ ಸಾಧನೆಗಳನ್ನು ತಿಳಿಸಿದರು. ಮಾಪಲಾಡಿ ಸುರೇಶ್ ಶೆಟ್ಟಿ ಮಾಪಲಾಡಿಯವರು ಇವರಿಗೆ ಅವಕಾಶವನ್ನು ನಿರ್ಮಿಸಿಕೊಟ್ಟಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಭಗವತಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದಲ್ಲಿ ಮಂಜುನಾಥ್ ಅವರು ತೊಡಗಿಸಿಕೊಂಡಿದ್ದು, ದೇವಿಯ ಅನುಗ್ರಹ ಇವರ ಈ ಸಾಧನೆಗೆ ಕಾರಣವಾಗಿದೆ ಎಂದು ಅಭಿಪ್ರಾಯ ಪಟ್ಟರು.

2022ರಲ್ಲಿ ನಡೆದ ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾತ್ರಿ ನಡೆಯುತ್ತಿದ್ದ ಶ್ರಮದಾನದಲ್ಲಿ ಮಂಜುನಾಥ್ ಅವರು ಸಕ್ರೀಯವಾಗಿ ಭಾಗವಹಿಸಿ ದೇವಿಯ ಸೇವೆಯನ್ನು ಮಾಡಿದ್ದರು. ದೇವಿಯ ಅನುಗ್ರಹದಿಂದ ಅವರು ಪ್ರಥಮ ಹಂತದಲ್ಲೇ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಬರೆದು ಪಾಸಾಗಿದ್ದಾರೆ ಎಂಬ ನಂಬಿಕೆ ಭಕ್ತ ಸಮೂಹದಲ್ಲಿದೆ. ಇವರ ತಾಯಿ ನಿಂಗವ್ವ ಮಾಪಲಾಡಿ ಸುರೇಶ್ ಶೆಟ್ಟಿ ಭ್ರಾಮರಿ ಇವರ ಮನೆಯಲ್ಲಿ ತೋಟದ ಕೆಲಸ ಮಾಡಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದರು. ಮಂಜುನಾಥ್ ಇವರ ಸಾಧನೆಯನ್ನು ಗುರುತಿಸಿ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ರಮೇಶ್ ಬಂಗೇರ ಅಂಕಾಜೆ ಲಾಯಿಲ, ಲಕ್ಷ್ಮಣ ಶಾಂತಿ, ಯಶವಂತ ಶಾಂತಿ, ಮಂಜುನಾಥ್ ಅವರ ತಾಯಿ ನಿಂಗವ್ವ, ಶೀನ ಮೇಲಂತಬೆಟ್ಟು ಉಪಸ್ಥಿತರಿದ್ದರು. ಕ್ಷೇತ್ರದಲ್ಲಿ ಸಂಕ್ರಾಂತಿ ಪೂಜೆ ಹಾಗೂ ವಿಶೇಷ ರಂಗಪೂಜೆ ಲಕ್ಷ್ಣಣ ಶಾಂತಿ ಅವರ ನೇತೃತ್ವದಲ್ಲಿ ನಡೆಯಿತು.

Related posts

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya
error: Content is protected !!