24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಸೌತಡ್ಕ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಉಡುಪಿಯ ಶ್ರೀ ನಿಹಾಲ್ ವಿಲ್ಸನ್, ಕಾರ್ಕಳದ ಶ್ರೀ ಸಂದೀಶ್, ಆತ್ರಾಡಿಯ ಶ್ರೀ ರಮೇಶ್ ನಾಯ್ಕ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಮಾ.15 ರಂದು ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ನಿವೃತ್ತ ಮಹಿಳಾ ಆರೋಗ್ಯ ಸಂದರ್ಶಕರು ಹಾಗೂ ಸೇವಾಭಾರತಿ POSH ಕಮಿಟಿಯ ಅಧ್ಯಕ್ಷರಾದ ಶ್ರೀಮತಿ ವಸಂತಿ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ದಿವ್ಯಾಂಗರಿಗೆ ಶುಭಹಾರೈಸಿ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಹ ಪ್ರಚಾರ ಪ್ರಮುಖ ಶ್ರೀ ಗಣೇಶ್ ಕೊಕ್ಕಡ, ಕೊಕ್ಕಡದ ಶ್ರೀಮತಿ ಮಾಳವಿಕ, ಸೇವಾಭಾರತಿ ಅಧ್ಯಕ್ಷರಾದ ಶ್ರೀ ವಿನಾಯಕ ರಾವ್, ಟ್ರಸ್ಟಿ ಶ್ರೀಮತಿ ಸ್ವರ್ಣಗೌರಿ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya
error: Content is protected !!