24.6 C
ಪುತ್ತೂರು, ಬೆಳ್ತಂಗಡಿ
August 1, 2026
Uncategorized

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಕೊಕ್ಕಡ:ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಶಿವಪ್ಪ(37) ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ವಿದ್ಯುತ್ ಲೈನ್ ಕಂಬಗಳ ಅಳವಡಿಕೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಿದ್ದ ಶಿವಪ್ಪ ಅವರು ಸ್ಥಳೀಯವಾಗಿ ವಿವಿಧ ಕಡೆಗಳಲ್ಲಿ ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದರು.

ಸೋಮವಾರ ಬೆಳಗ್ಗೆ ಎಂದಿನಂತೆ ಧರ್ಮಸ್ಥಳ ಸಮೀಪದ ಪ್ರದೇಶದಲ್ಲಿ ವಿದ್ಯುತ್ ಕಂಬ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಸಂಜೆ ವೇಳೆಗೆ ಕೊಕ್ಕಡದ ಭಜನಾ ಮಂದಿರದ ಸಮೀಪ ಹಳೆಯ ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಕಂಬವು ನಿಯಂತ್ರಣ ತಪ್ಪಿ ಶಿವಪ್ಪ ಅವರ ತಲೆಗೆ ಬಡಿದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

Related posts

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya
error: Content is protected !!