28.5 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

ಕೊಯ್ಯೂರು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಸುಮಾರು 2 ಲಕ್ಷ ಅನುದಾನದಲ್ಲಿ ಒದಗಿಸಲ್ಪಟ್ಟ ಸ್ಮಾರ್ಟ್ ಟಿ. ವಿ. ಶೈಕ್ಷಣಿಕ ಪರಿಕರಗಳ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಾಯಿಲ ವಿಭಾಗದ ಮೇಲ್ವಿಚಾರಕ ಸುಶಾಂತ್ ಕಾರ್ಯಕ್ರಮ ಉದ್ಘಾಟಿಸಿ, “ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಮೂಡಿಸಿಕೊಳ್ಳಬೇಕು. ತಂತ್ರಜ್ಞಾನ ಆಧಾರಿತ ಇಂತಹ ವ್ಯವಸ್ಥೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬೇಕು ” ಎಂದು ಕರೆನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಗನ್ನಾಥ ವಹಿಸಿದ್ದರು.

ವೇದಿಕೆಯಲ್ಲಿ ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಲೀಲಾ, ಅಮ್ಮಂದಿರ ಸಮಿತಿ ಉಪಾಧ್ಯಕ್ಷೆ ಮೋಹಿನಿ , ಎಸ್ ಡಿ ಎಂ ಸಿ ಹಿರಿಯ ಸದಸ್ಯ ಸಂಜೀವ ಮಲೆಕುಡಿಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಶಿಕ್ಷಕಿ ವಸಂತಿ ಕೆ ಎನ್. ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ ಶಿಕ್ಷಣ ವ್ಯವಸ್ಥೆಯಲ್ಲಿ ಡಿಜಿಟಲೀಕರಣ ಮತ್ತು ಪರೀಕ್ಷಾ ತಯಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಿದರು.ಜಿ. ಪಿ. ಟಿ. ಶಿಕ್ಷಕಿ ಬಿ. ಸುಶ್ಮಿತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು.ಜಿ. ಪಿ. ಟಿ. ಶಿಕ್ಷಕಿ ಶ್ರೀಮತಿ ದೇವಿ ಬಾಯಿ ಡಿ. ವಂದಿಸಿದರು. ಸಹಶಿಕ್ಷಕಿಯರಾದ ವಿಜಯಶ್ರೀ, ವೇದಾವತಿ ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳು ಮತ್ತು ಎಸ್ ಡಿ ಎಂ ಸಿ. ಸದಸ್ಯರು ಸಹಕರಿಸಿದರು.

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!