24.6 C
ಪುತ್ತೂರು, ಬೆಳ್ತಂಗಡಿ
June 18, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

ಜೆಸಿಐ ಉಜಿರೆ ಸಿಟಿ ವತಿಯಿಂದ, ಪ್ರಗತಿ ಮಹಿಳಾ ಮಂಡಲ ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಗತಿಪರ ಕೃಷಿಕರಾಗಿ ಸಾಧನೆಗೈದ ಜಯಶ್ರೀ ಪ್ರಕಾಶ್ ಅಪ್ರಮೇಯ ಇವರನ್ನು ವಾವ್ ಉಮೆನ್ ಆಫ್ ವರ್ಥ್ ಅವಾರ್ಡ್ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಓಮನ ಇವರ ಸುಧೀರ್ಘ ಸೇವೆ ಮತ್ತು ರಾಷ್ಟ್ರಮಟ್ಟದ ಕ್ರೀಡಾ ಸಾಧನೆಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ಜೇಸಿಐ ವಲಯ ನಿರ್ದೇಶಕ ರಂಜಿತ್ ಎಚ್ ಡಿ ಹಾಗೂ ವಲಯದ ತರಬೇತಿ ವಿಭಾಗದ ಸಂಯೋಜಕಿ ಆಶಾಲತಾ ಪ್ರಶಾಂತ್ ಉಪಸ್ಥಿತರಿದ್ದು ಜೆಸಿಐಯ ಕಾರ್ಯ ಚಟುವಟಿಕೆಗಳ ಕುರಿತು ಮಾತನಾಡಿ ಮಹಿಳಾ ದಿನಾಚರಣೆಗೆ ಶುಭ ಕೋರಿದರು.

ಘಟಕದ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ಸನ್ಮಾನಿತರನ್ನು ಅಭಿನಂದಿಸಿ ಮಾತನಾಡಿದರು. ಜೇಸಿ ಸದಸ್ಯ ಅಬ್ದುಲ್ ಖಾದರ್ ಮಹಿಳಾ ದಿನಾಚರಣೆಗೆ ಶುಭ ಕೋರಿ ಸನ್ಮಾನ ಪತ್ರವನ್ನು ವಾಚಿಸಿದರು.

ಅಭಿನಂದನ ಕಾರ್ಯಕ್ರಮದ ಬಳಿಕ ಮಹಿಳೆಯರಿಗೆ ಆತ್ಮ ರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಸಬ್ ಇನ್ಸ್ಪೆಕ್ಟರ್ ಓಮನಾರವರು ನಡೆಸಿಕೊಟ್ಟರು. ಮಹಿಳೆಯರಿಗೆ ಮನೋರಂಜನಾ ಆಟ ಸ್ಪರ್ಧೆಗಳನ್ನು ನಡೆಸಲಾಯಿತು. ಸುಮಿತ್ರಾ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷ ಪ್ರಶಾಂತ್ ಲಾಯಿಲ ಅಧ್ಯಕ್ಷ ಜಿತೇಶ್ ಜೆಸಿ ಸದಸ್ಯರು ಪ್ರಗತಿ ಮಹಿಳಾ ಮಂಡಲದ ಸದಸ್ಯರು ಭಾಗವಹಿಸಿದ್ದರು.

ಅಬ್ದುಲ್ ಖಾದರ್ ಕಾರ್ಯಕ್ರಮಕ್ಕೆ ಶುಭಕೋರಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಮಹಿಳಾ ಜೆ ಸಿ ವಿಭಾಗದ ಸಂಯೋಜಕಿ ಹೇಮಾವತಿ ಕೆ ಸ್ವಾಗತಿಸಿದರು. ಆತ್ಮಿಕ ವಿ.ಕೆ ರಾಜ್ ರವರ ಜೇಸಿವಾಣಿ ವಾಚಿಸಿದರು. ಕಾರ್ಯದರ್ಶಿ ಭವ್ಯಶ್ರೀ ಕೀರ್ತಿರಾಜ್ ಧನ್ಯವಾದವಿತ್ತರು.

Related posts

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ2023-2024 ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya
error: Content is protected !!