August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

ಬೆಳ್ತಂಗಡಿ: ಗ್ರಾಮದೈವ ಶ್ರೀ ಕೊಡಮಣಿತ್ತಾಯ ಮತ್ತು ಗುತ್ತು ಭಾಮ ದೈವ, ಶ್ರೀ ಜುಮಾದಿ ಹಾಗೂ ಸಹ
ಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವುಗುತ್ತು ದೈವ ಕ್ಷೇತ್ರದಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ ಮಾ.14 ರಂದು ನಡೆಯಿತು. ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಅಪ್ಪೆ ಕಲ್ಲುರ್ಟಿ ದೈವದ ಮೊರೆ ಹೋದ ಭಕ್ತರ ಸಂಕಷ್ಟಗಳು ಹಾಗೂ ಅಭೀಷ್ಟೆಗಳು ನೆರವೇರಿದ ನಿದರ್ಶನಗಳು ಈ ಕ್ಷೇತ್ರದಲ್ಲಿದೆ. ಹಾಗಾಗಿ ಭಕ್ತರು ಹರಕೆ ರೂಪದಲ್ಲಿ ಅಪ್ಪೆ ಕಲ್ಲುರ್ಟಿ ದೈವಕ್ಕೆ ಮಲ್ಲಿಗೆ, ಸೀರೆಗಳನ್ನು ಸಲ್ಲಿಸಿದರು.

ದೈವನ್ನೇ ದೇವರು ಎಂದ ನಂಬುವ ತುಳುನಾಡಿನ ಮಂದಿ ಕಲ್ಲುರ್ಟಿ ದೈವದ ದೊಂದಿ ಕೋಲ ನೋಡಲು ಸಾವಿರಾರೂ ಮಂದಿ ಭಕ್ತರು ಸೇರಿದ್ದರು. ಬೆಳಿಗ್ಗೆ ಗ್ರಾಮ ದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮೂಹೂರ್ತ ನಡೆಸಲಾಯಿತು.

ರಾತ್ರಿ ಕಲ್ಕುಡ-ಕಲ್ಲುರ್ಟಿ ದೈವದ ಚಾರಿತ್ರೆಯನ್ನು ಬಿಂಬಿಸುವ ಜೋಡು ಜೀಟಿಗೆ ಸತ್ಯೋದ ಸಾದಿಗ್ ಧರ್ಮೋದ ಬೊಲ್ಪು ತುಳು ಜನಪದ ನಾಟಕ ಪ್ರದರ್ಶನಗೊಂಡಿತು. ಸಾವಿರಕ್ಕೂ ಮಿಕ್ಕಿ ಜನಸಾಗರ ಸೇರಿತ್ತು.

ಬಡೆಕ್ಕಾವು ಗುತ್ತು ಮನೆತನದ ಮುಖ್ಯಸ್ಥ ರಕ್ಷಿತ್ ಅಜಿಲ, ಬಡೆಕ್ಕಾವು ಗುತ್ತು ಮನೆತನದವರು, ಅರ್ಚಕರು, ನಾವೂರು ಗುತ್ತು ಮನೆಯವರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು ಪರವೂರಿನವರು ಮತ್ತು ನಾವೂರು ಗ್ರಾಮದ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya
error: Content is protected !!