May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

ಬೆಳ್ತಂಗಡಿ: ಗ್ರಾಮದೈವ ಶ್ರೀ ಕೊಡಮಣಿತ್ತಾಯ ಮತ್ತು ಗುತ್ತು ಭಾಮ ದೈವ, ಶ್ರೀ ಜುಮಾದಿ ಹಾಗೂ ಸಹ
ಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವುಗುತ್ತು ದೈವ ಕ್ಷೇತ್ರದಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ ಮಾ.14 ರಂದು ನಡೆಯಿತು. ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಅಪ್ಪೆ ಕಲ್ಲುರ್ಟಿ ದೈವದ ಮೊರೆ ಹೋದ ಭಕ್ತರ ಸಂಕಷ್ಟಗಳು ಹಾಗೂ ಅಭೀಷ್ಟೆಗಳು ನೆರವೇರಿದ ನಿದರ್ಶನಗಳು ಈ ಕ್ಷೇತ್ರದಲ್ಲಿದೆ. ಹಾಗಾಗಿ ಭಕ್ತರು ಹರಕೆ ರೂಪದಲ್ಲಿ ಅಪ್ಪೆ ಕಲ್ಲುರ್ಟಿ ದೈವಕ್ಕೆ ಮಲ್ಲಿಗೆ, ಸೀರೆಗಳನ್ನು ಸಲ್ಲಿಸಿದರು.

ದೈವನ್ನೇ ದೇವರು ಎಂದ ನಂಬುವ ತುಳುನಾಡಿನ ಮಂದಿ ಕಲ್ಲುರ್ಟಿ ದೈವದ ದೊಂದಿ ಕೋಲ ನೋಡಲು ಸಾವಿರಾರೂ ಮಂದಿ ಭಕ್ತರು ಸೇರಿದ್ದರು. ಬೆಳಿಗ್ಗೆ ಗ್ರಾಮ ದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮೂಹೂರ್ತ ನಡೆಸಲಾಯಿತು.

ರಾತ್ರಿ ಕಲ್ಕುಡ-ಕಲ್ಲುರ್ಟಿ ದೈವದ ಚಾರಿತ್ರೆಯನ್ನು ಬಿಂಬಿಸುವ ಜೋಡು ಜೀಟಿಗೆ ಸತ್ಯೋದ ಸಾದಿಗ್ ಧರ್ಮೋದ ಬೊಲ್ಪು ತುಳು ಜನಪದ ನಾಟಕ ಪ್ರದರ್ಶನಗೊಂಡಿತು. ಸಾವಿರಕ್ಕೂ ಮಿಕ್ಕಿ ಜನಸಾಗರ ಸೇರಿತ್ತು.

ಬಡೆಕ್ಕಾವು ಗುತ್ತು ಮನೆತನದ ಮುಖ್ಯಸ್ಥ ರಕ್ಷಿತ್ ಅಜಿಲ, ಬಡೆಕ್ಕಾವು ಗುತ್ತು ಮನೆತನದವರು, ಅರ್ಚಕರು, ನಾವೂರು ಗುತ್ತು ಮನೆಯವರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು ಪರವೂರಿನವರು ಮತ್ತು ನಾವೂರು ಗ್ರಾಮದ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!