September 17, 2026
ಚಿತ್ರ ವರದಿಪುತ್ತೂರುವರದಿ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

ಪುತ್ತೂರು: ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿರ್ಮಿಸಲಾದ ಸಿ.ಬಿ.ಜಿ (Compressed Bio Gas) ಘಟಕದ ಲೋಕಾರ್ಪಣೆ ಮಾ.15ರಂದು ಪುತ್ತೂರು ನಗರಸಭೆಯ ಸ್ವಚ್ಛ–ಬನ್ನೂರಿನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ನೆರವೇರಿತು.

ಯಾವುದೇ ಊರು ಅಭಿವೃದ್ಧಿಯಾಗಬೇಕಾದರೆ ಮೊದಲು ಸ್ವಚ್ಛತೆಯ ಕಡೆಗೆ ಗಮನ ಹರಿಸಬೇಕು. ಆ ನಿಟ್ಟಿನಲ್ಲಿ ಪುತ್ತೂರಿನ ಹಸಿ ತ್ಯಾಜ್ಯ ನಿರ್ವಹಣೆಗಾಗಿ ಬನ್ನೂರಿನ ಈ ಘಟಕದಲ್ಲಿ ನಿರ್ಮಿಸಲಾದ ಸಿಬಿಜಿ ಘಟಕವು ರಾಜ್ಯದ ನಗರಸಭೆ ವ್ಯಾಪ್ತಿಯಲ್ಲಿ ಮೊಟ್ಟಮೊದಲನೆಯದಾಗಿದೆ. ಪುತ್ತೂರಿನ ಈ ಘಟಕದ ಯಶಸ್ಸು ಮುಂದೆ ರಾಜ್ಯದ ಇತರ ನಗರಗಳಿಗೂ ಮಾದರಿ ಹಾಗೂ ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದೆ. ಸುಮಾರು 12 ವರ್ಷಗಳ ಸತತ ಪರಿಶ್ರಮ ಈ ಘಟಕದ ಸ್ಥಾಪನೆಯ ಹಿಂದಿದೆ. ಕಸ ಮತ್ತು ಚಿನ್ನ ಎರಡೂ ತದ್ವಿರುದ್ಧ ಎಂದು ನಾವು ಭಾವಿಸಿದರೆ, ಚಿನ್ನದ ಉದ್ಯಮದಲ್ಲಿರುವ ಕೃಷ್ಣನಾರಾಯಣ ಮುಳಿಯ ಅವರು ತಮ್ಮ ಸಂಸ್ಥೆಯ ಮೂಲಕ ತ್ಯಾಜ್ಯ ನಿರ್ವಹಣಾ ಘಟಕವನ್ನು ನಿರ್ಮಿಸಲು ಹೊರಟಿದ್ದು ನಿಜಕ್ಕೂ ಸಾಹಸದ ಕಾರ್ಯವೇ ಸರಿ. ಇದಕ್ಕೆ ಅನುಮತಿ ಪಡೆಯುವಲ್ಲಿಂದ ತೊಡಗಿ, ನಾನಾ ಹಂತದ ಪ್ರಮಾಣ ಪತ್ರಗಳನ್ನು ಪಡೆಯಲು ಬಹಳಷ್ಟು ಶ್ರಮ ಹಾಕಿದ್ದಾರೆ. ಕಸದಿಂದ ರಸ ಎಂಬ ಮಾತಿನಂತೆ ತ್ಯಾಜ್ಯದಿಂದ ಸಿಬಿಜಿ ಅನಿಲ ಇಂಧನ ಉತ್ಪಾದಿಸುವ ಘಟಕ ಆರಂಭಿಸಿದ್ದು ಸಣ್ಣ ಸಾಧನೆಯಲ್ಲ ಎಂದು ಶಾಸಕರು ಶ್ಲಾಘಿಸಿದರು.

ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌.ಎಲ್‌.ಪಿ ಮುಖ್ಯಸ್ಥರಾದ ಕೃಷ್ಣನಾರಾಯಣ ಮುಳಿಯ ಅವರು, ಈ ಘಟಕದ ಯೋಚನೆಯ ಹಂತದಿಂದ ಉದ್ಘಾಟನೆಯ ಹಂತದ ವರೆಗೆ ಕ್ರಮಿಸಿದ ಕಠಿಣ ಹಾದಿಯನ್ನು ವಿವರಿಸಿದರು. ನಾನಾ ತೊಡಕುಗಳು ಎದುರಾದರೂ ಹಿಡಿದ ಕೆಲಸವನ್ನು ಬಿಡದೆ ಕೊನೆ ಮುಟ್ಟಿಸುವ ಛಲದಿಂದ ತಾವು ಹಾಗೂ ತಮ್ಮ ಜತೆ ಸಹಕರಿಸಿ ಎಲ್ಲ ತಂಡಗಳು ಶ್ರಮಿಸಿರುವುದನ್ನು ನೆನಪಿಸಿಕೊಂಡರು.

ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌.ಎಲ್‌.ಪಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟ್ಯಾಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇವರ ಸಾರಥ್ಯದಲ್ಲಿ, ಪುತ್ತೂರು ನಗರಸಭೆಯ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನಗೊಂಡಿದೆ.

ಸಮಾರಂಭವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ ಬೆಳಗಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌.ಎಲ್‌.ಪಿ. ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಪುತ್ತೂರು ಎ.ಸಿ.ಪಿ ಸ್ಟೆಲ್ಲಾ ವರ್ಗೀಸ್, ಪುತ್ತೂರು ನಗರಸಭೆಯ ಪೌರಾಯುಕ್ತೆ ವಿದ್ಯಾ ಕಾಳೆ ಭಾಗವಹಿಸಿದ್ದರು.

ಗೌರವ ಉಪಸ್ಥಿತಿಯಾಗಿ ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ರೋಟರಿ ಮಾಜಿ ಜಿಲ್ಲಾ ಗವರ್ನರ್ (ಡಿಸ್ಟ್ರಿಕ್ಟ್ 3181) ಎಚ್.ಆರ್. ಕೇಶವ, ರಿಟ್ಯಾಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕಿ ಡಾ. ದಿವ್ಯ ಪ್ರಶಾಂತ್, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ರೊ. ಶಶಿಧರ್ ಕಿನ್ನಿಮಜಲು ಉಪಸ್ಥಿತರಿದ್ದು ಶುಭ ಹಾರೈಸಿದರು.

ನಗರದಲ್ಲಿ ಸಂಗ್ರಹವಾಗುವ ಸಾವಯವ ತ್ಯಾಜ್ಯವನ್ನು ಈ ಸಿ.ಬಿ.ಜಿ ಘಟಕದ ಮೂಲಕ ಸಂಸ್ಕರಿಸಿ ಬಯೋ ಗ್ಯಾಸನ್ನು ಉತ್ಪಾದಿಸಲಾಗುತ್ತದೆ. ಇದರಿಂದ ತ್ಯಾಜ್ಯ ನಿರ್ವಹಣೆ ಸುಧಾರಣೆ, ಪರಿಸರ ಮಾಲಿನ್ಯ ಕಡಿತ, ಕಾರ್ಬನ್ ಡೈಆಕ್ಸೈಡ್ ವಿಸರ್ಜನೆಯ ತಗ್ಗುವಿಕೆ ಸೇರಿದಂತೆ ಹಲವಾರು ಪ್ರಯೋಜನಗಳು ಲಭ್ಯವಾಗಲಿವೆ. ಅಲ್ಲದೆ ಉತ್ಪಾದನೆಯಾಗುವ ಗ್ಯಾಸನ್ನು ವಾಹನಗಳಿಗೆ ಇಂಧನವಾಗಿ ಬಳಸುವ ಸಾಧ್ಯತೆ ಕೂಡ ಇದೆ.

Related posts

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!