May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

Suddi Udaya
error: Content is protected !!