36.7 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

ಉಜಿರೆಯ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ ಕೃಷ್ಣಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಆರಂಭವಾಯಿತು.

ಉಜಿರೆಯ ಪಡುವೆಟ್ಟು ಮನೆಯ ಶ್ರೀಮತಿ ಕುಸುಮ ವಿ. ಪಡ್ವೆಟ್ನಾಯ ದೀಪ ಪ್ರಜ್ವಲಿಸಿ ಭಾರತ ಮಾತೆಗೆ ಪುಷ್ಪ ಅರ್ಪಿಸುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುತ್ತೂರು ಜಿಲ್ಲಾ ಸಂಘ ಚಾಲಕ ವಿನಯಚಂದ್ರ ಭಾಗವಹಿಸಿ ಭಾರತ ಮಾತಾ ಪೂಜನ ದ ಮಹತ್ವ ತಿಳಿಸಿದರು.

ಯಕ್ಷಭಾರತಿಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಉಪಸ್ಥಿತರಿದ್ದರು. ಟ್ರಸ್ಟಿ ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಶ್ರೀನಿವಾಸ ರಾವ್ ಕಲ್ಮಂಜ ವಂದೇ ಮಾತರಂ ಹಾಡಿದರು. ಕು. ಶ್ರೀವಿದ್ಯಾ ಮತ್ತು ಕು. ಆಶ್ರಿತಾ ದೇಶಭಕ್ತಿ ಗೀತೆ ಹಾಡಿದರು. ಜೊತೆಕಾರ್ಯದರ್ಶಿ ಭವ್ಯ ಹೊಳ್ಳ ನಿರೂಪಿಸಿ, ಕೌಶಿಕ್ ರಾವ್ ವಂದಿಸಿದರು. ಟ್ರಸ್ಟಿಗಳಾದ ರತ್ನವರ್ಮ ಜೈನ್, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಕೃಷ್ಣ. ಡಿ, ಯಶೋಧರ ಇಂದ್ರ ಸಹಕರಿಸಿದರು.

Related posts

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!