23.7 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

ಉಜಿರೆಯ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ ಕೃಷ್ಣಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಆರಂಭವಾಯಿತು.

ಉಜಿರೆಯ ಪಡುವೆಟ್ಟು ಮನೆಯ ಶ್ರೀಮತಿ ಕುಸುಮ ವಿ. ಪಡ್ವೆಟ್ನಾಯ ದೀಪ ಪ್ರಜ್ವಲಿಸಿ ಭಾರತ ಮಾತೆಗೆ ಪುಷ್ಪ ಅರ್ಪಿಸುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುತ್ತೂರು ಜಿಲ್ಲಾ ಸಂಘ ಚಾಲಕ ವಿನಯಚಂದ್ರ ಭಾಗವಹಿಸಿ ಭಾರತ ಮಾತಾ ಪೂಜನ ದ ಮಹತ್ವ ತಿಳಿಸಿದರು.

ಯಕ್ಷಭಾರತಿಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಉಪಸ್ಥಿತರಿದ್ದರು. ಟ್ರಸ್ಟಿ ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಶ್ರೀನಿವಾಸ ರಾವ್ ಕಲ್ಮಂಜ ವಂದೇ ಮಾತರಂ ಹಾಡಿದರು. ಕು. ಶ್ರೀವಿದ್ಯಾ ಮತ್ತು ಕು. ಆಶ್ರಿತಾ ದೇಶಭಕ್ತಿ ಗೀತೆ ಹಾಡಿದರು. ಜೊತೆಕಾರ್ಯದರ್ಶಿ ಭವ್ಯ ಹೊಳ್ಳ ನಿರೂಪಿಸಿ, ಕೌಶಿಕ್ ರಾವ್ ವಂದಿಸಿದರು. ಟ್ರಸ್ಟಿಗಳಾದ ರತ್ನವರ್ಮ ಜೈನ್, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಕೃಷ್ಣ. ಡಿ, ಯಶೋಧರ ಇಂದ್ರ ಸಹಕರಿಸಿದರು.

Related posts

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya
error: Content is protected !!