September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ.

ಈ ಕ್ರ್ಯಾಶ್ ಕೋರ್ಸ್‌ನಲ್ಲಿ ಪ್ರತಿಯೊಂದು ಅಧ್ಯಾಯವನ್ನು ತಜ್ಞ ಉಪನ್ಯಾಸಕರು ಬೋಧಿಸುವುದರ ಜೊತೆಗೆ ಅಧ್ಯಯನಕ್ಕೆ ಅಗತ್ಯವಾದ ರೆಫರೆನ್ಸ್ ಮಾಡ್ಯೂಲ್‌ಗಳು ಹಾಗೂ ತರಗತಿ ಕಾರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪ್ರತಿದಿನ ಅಭ್ಯಾಸ ಪತ್ರಿಕೆಗಳೊಂದಿಗೆ ಅಧ್ಯಾಯವಾರು ಪರೀಕ್ಷೆಗಳನ್ನೂ ನಡೆಸಲಾಗುತ್ತದೆ. ಮೊದಲ 20 ದಿನಗಳಲ್ಲಿ ಮೂರು ದಿನಕ್ಕೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ, ನಂತರ ಪ್ರತಿದಿನ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳ ತಯಾರಿಯನ್ನು ಮತ್ತಷ್ಟು ಪರಿಣಾಮಕಾರಿ ಯಾಗಿ ನಡೆಸುವುದು ಇದರ ಉದ್ದೇಶವಾಗಿದೆ.

ಕ್ರ್ಯಾಶ್ ಕೋರ್ಸ್ ತರಬೇತಿಯಲ್ಲಿ ಒಟ್ಟು 15 ಪ್ರಮುಖ ಪರೀಕ್ಷೆಗಳು, ಪರೀಕ್ಷೆಗೆ ಸಂಬಂಧಿಸಿದ ಶಾರ್ಟ್‌ಕಟ್ ವಿಧಾನಗಳು ಹಾಗೂ ತಜ್ಞರ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಜೊತೆಗೆ KCET ಕೃಷಿ ಕೋಟಾಗೆ ಸಂಬಂಧಿಸಿದ ಪ್ರಾಯೋಗಿಕ ತರಬೇತಿಯನ್ನೂ ನೀಡಲಾಗುತ್ತದೆ.

ಕ್ರ್ಯಾಶ್ ಕೋರ್ಸ್ ಗೆ ಸೇರುವಲ್ಲಿ ಉತ್ಸುಕರಾಗಿದ್ದವರು ಹೆಚ್ಚಿನ ಮಾಹಿತಿಗಾಗಿ 7618718793, 7618718794, 7618718795 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ‌ ತಿಳಿಸಿದೆ.

Related posts

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya
error: Content is protected !!