23.4 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು ಮತ್ತು ಬೀದಿಗಳಲ್ಲಿ ತುಂಬಿಕೊಂಡಿದ್ದ ಕಸದ ರಾಶಿಗಳಿಂದ ನೆಲ್ಯಾಡಿ ಪೇಟೆ ಅಸ್ವಚ್ಛತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾಜಕ್ಕೆ ಮಾದರಿಯಾಗುವ ಉದ್ದೇಶದಿಂದ ಪೇಟೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ಕಸವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮವನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರ ಉಪಸ್ಥಿತಿಯಲ್ಲಿ ಯೂತ್ ಮೂವ್ಮೆಂಟ್ ಅಧ್ಯಕ್ಷ ತೋಮಸ್ ವಾಯಯಿಲ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ರೆಜಿ ಕೊಳಂಗರಾತ್, ಜೋನ್ಸನ್ ಪುಳಿಕ್ಕಲ್, ರಾಜೇಶ್ ತೆಕ್ಕನಾಟ್, ಜೋಯ್ ಪುತ್ತೇನ್ ಪರಂಭಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ಶಾಜಿ ಮಾತ್ಯು ಅವರು, “ಪೇಟೆಯ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ. ವರ್ತಕರು, ಸಾರ್ವಜನಿಕರು, ಗ್ರಾಹಕರು ಹಾಗೂ ಸ್ಥಳೀಯ ಗ್ರಾಮಾಡಳಿತ ಎಲ್ಲರೂ ಕೈಜೋಡಿಸಿದಾಗ ಮಾತ್ರ ಪೇಟೆಯನ್ನು ಶಾಶ್ವತವಾಗಿ ಸ್ವಚ್ಛವಾಗಿರಿಸಲು ಸಾಧ್ಯ,” ಎಂದು ತಿಳಿಸಿದರು.

ಈ ಸ್ವಚ್ಛತಾ ಅಭಿಯಾನದಲ್ಲಿ ಸೀರೋಮಲಬಾರ್ ಯೂತ್ ಮೂವ್ಮೆಂಟ್‌ನ ಯುವಕರು ಉತ್ಸಾಹದಿಂದ ಭಾಗವಹಿಸಿದ್ದರು.

Related posts

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
error: Content is protected !!