22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು ಮತ್ತು ಬೀದಿಗಳಲ್ಲಿ ತುಂಬಿಕೊಂಡಿದ್ದ ಕಸದ ರಾಶಿಗಳಿಂದ ನೆಲ್ಯಾಡಿ ಪೇಟೆ ಅಸ್ವಚ್ಛತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾಜಕ್ಕೆ ಮಾದರಿಯಾಗುವ ಉದ್ದೇಶದಿಂದ ಪೇಟೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ಕಸವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮವನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರ ಉಪಸ್ಥಿತಿಯಲ್ಲಿ ಯೂತ್ ಮೂವ್ಮೆಂಟ್ ಅಧ್ಯಕ್ಷ ತೋಮಸ್ ವಾಯಯಿಲ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ರೆಜಿ ಕೊಳಂಗರಾತ್, ಜೋನ್ಸನ್ ಪುಳಿಕ್ಕಲ್, ರಾಜೇಶ್ ತೆಕ್ಕನಾಟ್, ಜೋಯ್ ಪುತ್ತೇನ್ ಪರಂಭಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ಶಾಜಿ ಮಾತ್ಯು ಅವರು, “ಪೇಟೆಯ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ. ವರ್ತಕರು, ಸಾರ್ವಜನಿಕರು, ಗ್ರಾಹಕರು ಹಾಗೂ ಸ್ಥಳೀಯ ಗ್ರಾಮಾಡಳಿತ ಎಲ್ಲರೂ ಕೈಜೋಡಿಸಿದಾಗ ಮಾತ್ರ ಪೇಟೆಯನ್ನು ಶಾಶ್ವತವಾಗಿ ಸ್ವಚ್ಛವಾಗಿರಿಸಲು ಸಾಧ್ಯ,” ಎಂದು ತಿಳಿಸಿದರು.

ಈ ಸ್ವಚ್ಛತಾ ಅಭಿಯಾನದಲ್ಲಿ ಸೀರೋಮಲಬಾರ್ ಯೂತ್ ಮೂವ್ಮೆಂಟ್‌ನ ಯುವಕರು ಉತ್ಸಾಹದಿಂದ ಭಾಗವಹಿಸಿದ್ದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!