September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಮತ್ತು ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡಿರುತ್ತದೆ.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ – ಕುಟೀರದಲ್ಲಿ 2026 ಮಾ.28ರಂದು ಅಪರಾಹ್ನ ಗಂಟೆ 3.30 ಕ್ಕೆ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ, ಕಿರಿಯ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು ಹಾಗೂ 1ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿ ಕವಿಗಳು, ಕಾಲೇಜ್ ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.
ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ,ಕನ್ನಡ ಗ್ರಾಮ, ಗ್ರಾಮರಸ್ತೆ, ಕಾಸರಗೋಡು-671121 ಮೊಬೈಲ್ :-9448572016 ಇವರನ್ನು ಸಂಪರ್ಕಿಸಬಹುದು. ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ – ಕುಟೀರ”ದಲ್ಲಿ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

Related posts

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯ ವಿರೋಧಿಸಿ ಶಿಶಿಲ ಮಲೆನಾಡಿ ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿಶಿಲ ಗ್ರಾ.ಪಂ. ಗೆ ಮನವಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!