August 2, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಫೆ.28ರಂದು ವೇಣೂರು ಗಾರ್ಡನ್ ವ್ಯೂ ಕಾಂಪ್ಲೆಕ್ಸ್‌ನಲ್ಲಿ ವಲಯದ ಅಧ್ಯಕ್ಷ ಉಮೇಶ್ ಟೈಲರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕ ಕಾರ್ಡ್ ವಿತರಣೆ ಮತ್ತು ಡಿಜಿಟಲ್ ಐಡಿ ಕಾರ್ಡ್ ವಿತರಣೆ ನಡೆಯಿತು.

ಕ್ಷೇತ್ರ ಸಮಿತಿಯ ಅಧ್ಯಕ್ಷ ರಾಜು ಪೂಜಾರಿ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಸಂಘಟನೆ ಮತ್ತು ಕಾರ್ಮಿಕ ಕಾರ್ಡ್ ಬಗ್ಗೆ ಮಾಹಿತಿ ನೀಡಿದರು ಅತೀ ಹೆಚ್ಚು ಸದಸ್ಯರ ರಿನಿವಲ್ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಲಾನ್ಸಿ ಡಿಸೋಜರವರು ಕಾರ್ಯಕ್ರಮದ ಮತ್ತು ಸಂಘಟನೆ ಬಗ್ಗೆ ವಿವರಿಸಿದರು.

ಜಿಲ್ಲಾ ಸಮಿತಿ ಉಪಾಧ್ಯಕ್ಷೆ ವೇದಾವತಿ ಜನಾರ್ದನ್ ನಮ್ಮ ವಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಸಮಿತಿ ಸದಸ್ಯ ರವೀಂದ್ರ ಉಪಸ್ಥಿತರಿದ್ದರು. ವಲಯದ ನಿರ್ಗಮನ ಅಧ್ಯಕ್ಷರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಹೊಸ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಮೀಳಾ ಹೊಸಂಗಡಿ, ಉಪಾಧ್ಯಕ್ಷರಾಗಿ ಹರೀಶ್ ಪೂಜಾರಿ, ಕಾರ್ಯದರ್ಶಿ ಸುಪ್ರೀತಾ, ಜತೆ ಕಾರ್ಯದರ್ಶಿಯಾಗಿ ನಮಿತಾ, ಜಯಪ್ರಭಾ, ಕೋಶಾಧಿಕಾರಿ ಜಯಶ್ರೀ ಮತ್ತು ನ್ಯಾನ್ಸಿ ಅವರನ್ನು ಆಯ್ಕೆ ಮಾಡಲಾಯಿತು. ಕ್ಷೇತ್ರ ಸಮಿತಿಗೆ ಆಯ್ಕೆ ಆದವರು ರತ್ನಾಕರ್ ಹೆಗ್ಡೆ, ಉಮೇಶ್ ಟೈಲರ್, ಆನಂದ್ ಟೈಲರ್, ಸಹನಾ ಶಾಸ್ತ್ರಿ, ವಸಂತ್ ವಿ.ಕೆ. ಟೈಲರ್ ಅವರನ್ನು ಆಯ್ಕೆ ಮಾಡಲಾಯಿತು.

ಸಂಘಟನಾ ಕಾರ್ಯದರ್ಶಿಯಾಗಿ ಕರಿಮಣೇಲು ಅಂಜಲಿ, ಮೂಡುಕೋಡಿ ಅಶ್ವಿತ, ಕುಕ್ಕೇಡಿ ಆನಂದ ಟೈಲರ್, ವೇಣೂರು ಸಹನಾ ಶಾಸ್ತ್ರಿ ಬಡಕೋಡಿ, ಹೊಸಂಗಡಿ ಪ್ರಮೀಳಾ, ಬಜಿರೆ ಸವಿತಾ, ಪಡಂಗಡಿ ಪ್ರೇಮಾ, ಗರ್ಡಾಡಿ ಸುನೀತಾ, ಅಂಡಿಂಜೆ ಜಯಂತಿ, ಗುಂಡೂರಿ ಶಶಿಕಲಾ, ಕೊಕ್ರಾಡಿ ವಿಶಾಲ ಹೆಗ್ಡೆ, ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಪ್ರಮೀಳಾ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿದರು. ಕೊಕ್ರಾಡಿ ವಿಶಾಲ ಹೆಗ್ಡೆ ಅವರು ಪ್ರಾರ್ಥನೆಯನ್ನು ಮಾಡಿದರು. ಸಹನಾ ವರದಿ ವಾಚಿಸಿದರು. ಸುಪ್ರೀತಾ ಲೆಕ್ಕಪತ್ರ ಮಂಡಿಸಿದರು. ಆನಂದ ಟೈಲರ್ ರವರು ಬಂದ ಅತಿಥಿಗಳನ್ನು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya
error: Content is protected !!