24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಾಧಕರು

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು.

ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಬೆಳಾಲು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಆಶಾ ಸಲ್ಧಾನ, ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya
error: Content is protected !!