34 C
ಪುತ್ತೂರು, ಬೆಳ್ತಂಗಡಿ
March 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಭಾಗವತರು, ಹಿಮ್ಮೇಳದ ಗುರುಗಳಾದ ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ “ಶ್ರೇಯ” ನಿವಾಸದಲ್ಲಿ ಪ್ರದಾನಿಸಲಾಯಿತು.

ಪ್ರಶಸ್ತಿಯ ಪ್ರಾಯೋಜಕರು ಮತ್ತು ಭಾಗವತರಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದರಾದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ,ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ ಹೆಗಡೆ ಮೋಹನ ಬೈಪಾಡಿತ್ತಾಯರನ್ನು ಅಭಿನಂದಿಸಿ ಮಾತನಾಡಿದರು.

.ಕಲಾವಿದ ವಿಶ್ವನಾಥ ಕೊಯ್ಯೂರು ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತ ಮೋಹನ ಬೈಪಾಡಿತ್ತಾಯರ ಪತ್ನಿ ಶ್ರೀಮತಿ ಲಲಿತಾ ಅವರನ್ನು ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮೋಹನ ಬೈಪಾಡಿತ್ತಾಯರು ಭಾಗವತ ತೆಂಕಬೈಲು ದಿ.ತಿರುಮಲೇಶ್ವರ ಶಾಸ್ತ್ರಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡು ಪೆರ್ಲ ಯಕ್ಷ ತರಬೇತಿ ಕೇಂದ್ರದ ಕಲಾ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಸ್ಥಾಪಕ ಮತ್ತು ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕನ್ಯಾಡಿ ಯಕ್ಷಭಾರತಿ ಸಂಚಾಲಕ, ಭಾಗವತ ಮಹೇಶ ಕನ್ಯಾಡಿ ವಂದಿಸಿದರು .ಅಧ್ಯಾಪಕ ಗೋವರ್ಧನ ಎಮ್. ಮೂಡಬಿದಿರೆ , ಹಿಮ್ಮೇಳ ಕಲಾವಿದ ನಾರಾಯಣ ಶರ್ಮ ಸಹಕರಿಸಿದರು.

Related posts

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!