29.5 C
ಪುತ್ತೂರು, ಬೆಳ್ತಂಗಡಿ
June 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಭಾಗವತರು, ಹಿಮ್ಮೇಳದ ಗುರುಗಳಾದ ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ “ಶ್ರೇಯ” ನಿವಾಸದಲ್ಲಿ ಪ್ರದಾನಿಸಲಾಯಿತು.

ಪ್ರಶಸ್ತಿಯ ಪ್ರಾಯೋಜಕರು ಮತ್ತು ಭಾಗವತರಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದರಾದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ,ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ ಹೆಗಡೆ ಮೋಹನ ಬೈಪಾಡಿತ್ತಾಯರನ್ನು ಅಭಿನಂದಿಸಿ ಮಾತನಾಡಿದರು.

.ಕಲಾವಿದ ವಿಶ್ವನಾಥ ಕೊಯ್ಯೂರು ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತ ಮೋಹನ ಬೈಪಾಡಿತ್ತಾಯರ ಪತ್ನಿ ಶ್ರೀಮತಿ ಲಲಿತಾ ಅವರನ್ನು ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮೋಹನ ಬೈಪಾಡಿತ್ತಾಯರು ಭಾಗವತ ತೆಂಕಬೈಲು ದಿ.ತಿರುಮಲೇಶ್ವರ ಶಾಸ್ತ್ರಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡು ಪೆರ್ಲ ಯಕ್ಷ ತರಬೇತಿ ಕೇಂದ್ರದ ಕಲಾ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಸ್ಥಾಪಕ ಮತ್ತು ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕನ್ಯಾಡಿ ಯಕ್ಷಭಾರತಿ ಸಂಚಾಲಕ, ಭಾಗವತ ಮಹೇಶ ಕನ್ಯಾಡಿ ವಂದಿಸಿದರು .ಅಧ್ಯಾಪಕ ಗೋವರ್ಧನ ಎಮ್. ಮೂಡಬಿದಿರೆ , ಹಿಮ್ಮೇಳ ಕಲಾವಿದ ನಾರಾಯಣ ಶರ್ಮ ಸಹಕರಿಸಿದರು.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!