May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ “ಕೃಷ್ಣಾನುಗ್ರಹ ಕಲ್ಯಾಣ ಮಂಟಪ”ದಲ್ಲಿ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭದ ನಿಮಿತ್ತ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರಸಂಗ “ಕರಂಡಕಾಸುರ ವಧೆ ” ಮಾ.7ರಂದು ಪ್ರದರ್ಶನಗೊಂಡಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಶ್ರೇಯಸ್ ಪಾಳಂದೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ಪ್ರಶಾಂತ ಮುಂಡ್ಕೂರು, ಅರ್ಜುನನಾಗಿ ಹರಿಶ್ಚಂದ್ರ ಆಚಾರ್ಯ ಚಾರ್ಮಾಡಿ, ಜಗಳಗ್ರಂಥಿಯಾಗಿ ಶಶಿಕಿರಣ ಕಾವು, ಕಲುಷಗಾಮಿನಿಯಾಗಿ ಸುರೇಶ ಬಾಯಾರು, ಶುಕತುಂಡನಾಗಿ ಪ್ರಶಾಂತ್ ಪುತ್ತೂರು, ಹನುಮಂತನಾಗಿ ಚಂದ್ರಶೇಖರ ಧರ್ಮಸ್ಥಳ, ಕರಂಡಕಾಸುರನಾಗಿ ಶೀಶ ಮಣಿಲ ಪಾತ್ರ ನಿರ್ವಹಿಸಿದರು.

ಶ್ರೀಮಾತಾ ಆರ್ಟ್ಸ್ ನ ಗುರುಪ್ರಸಾದ್ ವೇಷ ಭೂಷಣದಲ್ಲಿ ಸಹಕರಿಸಿದರು. ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಸಮಿತಿಯ ವತಿಯಿಂದ ನೀಡುವ ಗೌರವವನ್ನು ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ ಸ್ವೀಕರಿಸಿದರು.

Related posts

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!