32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ “ಕೃಷ್ಣಾನುಗ್ರಹ ಕಲ್ಯಾಣ ಮಂಟಪ”ದಲ್ಲಿ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭದ ನಿಮಿತ್ತ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರಸಂಗ “ಕರಂಡಕಾಸುರ ವಧೆ ” ಮಾ.7ರಂದು ಪ್ರದರ್ಶನಗೊಂಡಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಶ್ರೇಯಸ್ ಪಾಳಂದೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ಪ್ರಶಾಂತ ಮುಂಡ್ಕೂರು, ಅರ್ಜುನನಾಗಿ ಹರಿಶ್ಚಂದ್ರ ಆಚಾರ್ಯ ಚಾರ್ಮಾಡಿ, ಜಗಳಗ್ರಂಥಿಯಾಗಿ ಶಶಿಕಿರಣ ಕಾವು, ಕಲುಷಗಾಮಿನಿಯಾಗಿ ಸುರೇಶ ಬಾಯಾರು, ಶುಕತುಂಡನಾಗಿ ಪ್ರಶಾಂತ್ ಪುತ್ತೂರು, ಹನುಮಂತನಾಗಿ ಚಂದ್ರಶೇಖರ ಧರ್ಮಸ್ಥಳ, ಕರಂಡಕಾಸುರನಾಗಿ ಶೀಶ ಮಣಿಲ ಪಾತ್ರ ನಿರ್ವಹಿಸಿದರು.

ಶ್ರೀಮಾತಾ ಆರ್ಟ್ಸ್ ನ ಗುರುಪ್ರಸಾದ್ ವೇಷ ಭೂಷಣದಲ್ಲಿ ಸಹಕರಿಸಿದರು. ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಸಮಿತಿಯ ವತಿಯಿಂದ ನೀಡುವ ಗೌರವವನ್ನು ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ ಸ್ವೀಕರಿಸಿದರು.

Related posts

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya
error: Content is protected !!