23.3 C
ಪುತ್ತೂರು, ಬೆಳ್ತಂಗಡಿ
August 3, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ಇಂದಿನ ಮಹಜರು ಕಾರ್ಯ ಅಂತ್ಯ ಮಾಡಿ ವಾಪಸ್ ತೆರಳಿದ್ದಾರೆ.

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಡಿಪೋಸಿಟ್ ಫ್ರಾಂಡ್ ವಿಂಗ್ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ಸರಕಾರಿ ಪಂಚರ ಸಮ್ಮುಖದಲ್ಲಿ ಸಂಜೆ 7:45 ಗಂಟೆವರೆಗೆ ಮಹಜರು ಮಾಡಿ ವಾಪಸ್ ತೆರಳಿದ್ದು ನಾಳೆ ಮತ್ತೆ ಮಹಜರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಬೆಂಗಳೂರು ಸಿಐಡಿ ಡೆಪೋಸಿಟ್ ಫ್ರಾಂಡ್ ವಿಂಗ್ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಮಹಜರು ವೇಳೆ ಜೊತೆಯಲ್ಲಿದ್ದರು.

Related posts

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya
error: Content is protected !!