29.5 C
ಪುತ್ತೂರು, ಬೆಳ್ತಂಗಡಿ
June 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಆರಂಭಿಸಿದೆ.

ಪ್ರಕರಣದ ವಿವರ: ಬೆಳ್ತಂಗಡಿ ನಗರದ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ(ರಿ) ನಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣ ವಾಪಸ್ ಗ್ರಾಹಕರಿಗೆ ನೀಡದೆ ವಂಚನೆ ಮಾಡಿರುವುದು ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಂಚನೆಗೊಳಗಾದ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸೇರಿ ಒಟ್ಟು 13 ಜನ ನೊಂದವರು 22-05-2025 ರಂದು ಸೊಸೈಟಿಯ 14 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ 23-05-2025 ರಂದು KARNATAKA PROTECTION OF INTEREST DEPOSITIONS EXORBITANT ACT 2004 (u/s -9) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸೈಬರ್ ಕ್ರೈಂ ಹೋಗಿ ಇದೀಗ ಸಿಐಡಿಗೆ ಹಸ್ತಾಂತರವಾಗಿ ತನಿಖೆ ಆರಂಭವಾಗಿದೆ.

ಪ್ರಕರಣ 14 ಮಂದಿ ಆರೋಪಿಗಳು: 2021 ರಿಂದ 2024 ರ ವರೆಗೆ ಬ್ಯಾಂಕ್ ನಲ್ಲಿ ಜವಾಬ್ದಾರಿಯಲ್ಲಿದ್ದ 40 ಕೋಟಿ ರೂಪಾಯಿ ಹಣ (ವಂಚನೆ) ಹಗರಣದ ಲ್ಲಿ ಬ್ಯಾಂಕ್ ಸಿಇಒ ಚಂದ್ರಕಾಂತ್, ಅಧ್ಯಕ್ಷ ಪ್ರಭಾಕರ ಸಿ.ಹೆಚ್, ಉಪಾಧ್ಯಕ್ಷ ಸದಾನಂದ ಎಮ್ ಉಜಿರೆ, ಡೈರೆಕ್ಟರ್ ಗಳಾದ ವಿಶ್ವನಾಥ ಆರ್.ನಾಯಕ್, ಪ್ರಮೋದ್ ಆರ್‌. ನಾಯಕ್, ವಿಶ್ವನಾಥ, ಜಗನ್ನಾಥ ಪಿ, ರತ್ನಾಕರ, ಸುಮ ದಿನೇಶ್ ಉಜಿರೆ ನಯನ ಶಿವಪ್ರಸಾದ್, ಮೋಹನ್ ದಾಸ್ ಕೆ, ಕಿಶೋರ್ ಕುಮಾರ್ ಲಾಯಿಲ, ಬ್ಯಾಂಕ್ ಸಿಬ್ಬಂದಿ ಸರಿತಾ ಎಸ್ ಮತ್ತು ವಿನೋದ್ ಕುಮಾರ್ ಸಿ.ಹೆಚ್ ಸೇರಿ ಒಟ್ಟು 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ದೂರು ನೀಡಿದ್ದ 13 ಮಂದಿ ನೊಂದವರು: ದಯಾನಂದ ನಾಯಕ್, ನಿಧೀಶ್‌ ಡಿ. ನಾಯಕ್, ಶ್ರದ್ಧಾ ಬಿ, ಮಾಲಿನಿ ಟಿ. ರಾವ್, ತುಕರಾಮ್ ರಾವ್, ಅಕ್ಷಯಾ ಟಿ. ರಾವ್, ಅಕ್ಷತಾ ರಾವ್, ಚೈತ್ರಾ ಭಟ್, ಮೈತ್ರಿ ಭಟ್, ಸ್ವಾತಿ ಭಟ್, ನಂದಕುಮಾರ್, ಬಿ. ಗಣೇಶ್ ಭಟ್, ವಿದ್ಯಾ ಭಟ್ ಸೇರಿ 13 ಮಂದಿ ನೊಂದವರು ದೂರು ನೀಡಿದ್ದರು.

ಆಸ್ತಿ ಮುಟ್ಟುಗೋಲಿಗೆ ನೋಟಿಸ್ ಜಾರಿಯಾಗಿತ್ತು:  ಅಧ್ಯಕ್ಷ ಸಿ.ಹೆಚ್. ಪ್ರಭಾಕರ, ನಿರ್ದೇಶಕರಾದ ವಿಶ್ವನಾಥ ಆರ್. ನಾಯಕ್, ವಿಶ್ವನಾಥ, ಪ್ರಮೋದ್ ಆರ್.ನಾಯಕ್, ಕಿಶೋರ್ ಲಾಯಿಲ, ಪಿ.ಜಗನ್ನಾಥ್, ರತ್ನಾಕರ ಶೇರಿಗಾರ್, ನಯನ ಶಿವಪ್ರಸಾದ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಚಂದ್ರಕಾಂತ್, ಸಿಬ್ಬಂದಿ ಸರಿತಾ ಇವರು ಹತ್ತು ಮಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನ್ಯಾಯಾಲಯದಿಂದ 05-06-2025 ರಂದು ನೋಟಿಸ್ ಜಾರಿಯಾಗಿತ್ತು. ಇಲ್ಲವಾದರೆ 30,45,24,278 (ಮೂವತ್ತು ಕೋಟಿ ನಲವತ್ತೈದು ಲಕ್ಷದ ಇಪ್ಪತೈದು ಸಾವಿರದ ಇನ್ನೂರ ಇಪ್ಪತ್ತೆಂಟು ರೂಪಾಯಿ) ಭದ್ರತಾ ಠೇವಣಿ ಇಡಲು ಅವಕಾಶ ನೀಡಲಾಗಿತ್ತು. ಈ ನೋಟಿಸ್ ವಿರುದ್ಧ ಹೈಕೋರ್ಟ್ ಹೋಗಿ ಸ್ಟೇ ತಂದಿದ್ದರು. ಈ ಬಗ್ಗೆ ಸುದ್ದಿ ಉದಯ ವರದಿ ಕೂಡ ವರದಿ ಮಾಡಿತ್ತು.

ಸಿಐಡಿ ತನಿಖೆ ಆರಂಭ: ರೂ.40 ಕೋಟಿ ವಂಚನೆ ಪ್ರಕರಣವಾಗಿರುವ ಕಾರಣದಿಂದ ಈ ತನಿಖೆಯನ್ನು ಬೆಳ್ತಂಗಡಿ ಪೊಲೀಸ್ ಸೈಬರ್ ಕ್ರೈಂಗೆ ಹಸ್ತಾಂತರ ಮಾಡಿದ್ದರು ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ( Crime Investigation Department) ಗೆ ಹಸ್ತಾಂತರಿಸಿದ ಹಿನ್ನೆಲೆಯಲ್ಲಿ ಇದೀಗ ಅಧಿಕೃತವಾಗಿ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!