September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 2025 ಮಾ. 17 ರ ಕಾರ್ಯಾದೇಶದಂತೆ ಉಜಿರೆ ಗ್ರಾಮದ ವಿದ್ಯುತ್ ಘಟಕವನ್ನು 2026 ಮಾ.16 ರೊಳಗೆ ಲೋಕಾರ್ಪಣೆ ಮಾಡಬೇಕಾಗಿದ್ದು ಅರಣ್ಯ ಇಲಾಖೆಯ ಅನುಮತಿ ದೊರೆಯದ ಕಾರಣ ವಿಳಂಬವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಮಾ.9 ರಂದು ಸದನದಲ್ಲಿ ಉಜಿರೆ ಗ್ರಾಮದಲ್ಲಿನ 33 ಕೆ.ವಿ. ವಿದ್ಯುತ್ ಘಟಕವನ್ನು ಯಾವ ಕಾಲಮಿತಿಯೊಳಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಳಿದ ಚುಕ್ಕೆ ಪ್ರಶ್ನೆಗೆ
ಸಚಿವರು ಉತ್ತರಿಸಿದರು.

ಉಜಿರೆ ಗ್ರಾಮದಲ್ಲಿ 33ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಲು 2025 ಮಾ. 17 ರಂದು ಗುತ್ತಿಗೆ ಆದೇಶ ನೀಡಲಾಗಿದೆ. ಉಪಕೇಂದ್ರದ ಸ್ಥಾಪನೆಗೆ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿರುವ ಕೆಲವೊಂದು ಮರು-ಗಿಡಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಇರುವುದರಿಂದ, ಇಲಾಖೆಯ ಮಂಜೂರಾತಿಗಾಗಿ ದಿನಾಂಕ:21.11.2025 ರಂದು ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ. ಅರಣ್ಯ ಇಲಾಖೆಯ ಮಂಜೂರಾತಿ ದೊರೆತ ನಂತರ ಉಪಕೇಂದ್ರದ ಕಾಮಗಾರಿ ಪ್ರಾರಂಭಿಸಬೇಕಾಗಿರುತ್ತದೆ.
33 ಕೆವಿ ಉಪಕೇಂದ್ರಕ್ಕೆ ಅಗತ್ಯವಿರುವ ವಿದ್ಯುತ್ ಮಾರ್ಗ:- 231 ಸಂಖ್ಯೆಯ ಸ್ಮನ್ ಪೋಲ್ ಮತ್ತು 211 ಸಂಖ್ಯೆಯ ಟವರ್ ಗಳನ್ನು , 21.433 8., 33 ವಿದ್ಯುತ್ ಮಾರ್ಗವನ್ನು ನಿರ್ಮಿಸಬೇಕಾಗಿದ್ದು ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, 136 ಸಂಖ್ಯೆಯ 11 ಮೀಟ‌ರ್ ಸ್ಮನ್ ಪೋಲ್‌ಗಳು ಹಾಗೂ 91 ಸಂಖ್ಯೆಯ ಟವರ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುತ್ತದೆ.
ಕಾಮಗಾರಿಗೆ ಬೆಳ್ತಂಗಡಿ ತಾಲೂಕು, ಉಜಿರೆ ಗ್ರಾಮದ ಜಮೀನು ಸರ್ವನಂ:393/3ರಲ್ಲಿ 0.96 ಎಕರೆ ಸರ್ಕಾರಿ ಮಂಜೂರಾಗಿರುತ್ತದೆ. ಜಿಲ್ಲಾಧಿಕಾರಿಯವರ ಸಂಬಂಧಪಟ್ಟ ಮೊತ್ತಗಳನ್ನು ಪಾವತಿಸಿ, ಮೆಸ್ಕಾಂ ಹೆಸರಿಗೆ RTC ಆದೇಶದಂತೆ ವರ್ಗಾವಣೆಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಮೆಸ್ಕಾಂನ ಬಂಡವಾಳ ಕಾಮಗಾರಿ ಯೋಜನೆಯಡಿ ಕಾಮಗಾರಿಗೆ ಪರಿಷ್ಕೃತ ಅಂದಾಜು ವೆಚ್ಚದಂತೆ ರೂ.2636.32 ಲಕ್ಷ ನಿಗದಿಪಡಿಸಲಾಗಿದ್ದು, ಜನವರಿ-2026 ರ ಅಂತ್ಯಕ್ಕೆ, ರೂ. 489.13 ಲಕ್ಷ ವಿನಿಯೋಗಿಸಲಾಗಿದೆ. ಕಾಮಗಾರಿಯಲ್ಲಿ ಉಪಕೇಂದ್ರ ಸ್ಥಾಪನೆಗೆ ಬೇಕಾಗಿರುವ ಜಾಗವನ್ನು ಈಗಾಗಲೇ ನಿಗದಿ ಪಡಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ಸದರಿ ಜಾಗದಲ್ಲಿನ ಮರಗಳನ್ನು ತೆರವುಗೊಳಿಸುವಲ್ಲಿ ಅರಣ್ಯ ಇಲಾಖೆ ಆಕ್ಷೇಪಣೆ ಇರುವುದರಿಂದ, ಉಪಕೇಂದ್ರ ನಿರ್ಮಾಣ ಕಾಮಗಾರಿ ಆರಂಭವಾಗಿರುವುದಿಲ್ಲ ಎಂದು ಲಿಖಿತ ಉತ್ತರ ನೀಡಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya
error: Content is protected !!