34 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ಸಯೋಗದೊಂದಿಗೆ ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ.16 ರಂದು ಬೆಳ್ತಂಗಡಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರೀಯಾ ಆಗ್ನೇಸ್ ಚಾಕೋ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳಾ ಸುರಕ್ಷತ ಅಗತ್ಯೆತೆಗಳ ಕುರಿತು ತಿಳಿಸಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಜೇಮ್ಸ್ ಪಟ್ಟೇರಿಲ್ ರವರು ಅಧ್ಯಕ್ಷತೆಯನ್ನು ವಹಿಸಿ, 25 ವರ್ಷಗಳ ಕಾಲ ಡಿ.ಕೆ .ಆರ್.ಡಿ ಎಸ್ ಸಂಸ್ಥೆಯ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ನಡೆಸಿದ ಶ್ರಮವನ್ನು ಅಭಿನಂದಿಸಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ನಿಕಟಪೂರ್ವ ಧರ್ಮಾಧ್ಯಕ್ಷ ಅತೀ. ವಂದನೀಯ ಲಾರೆನ್ಸ್ ಮುಕ್ಕುಯಿ ಆಶೀರ್ವಚನ ನೀಡಿದರು.

ಸಂಸ್ಥೆಯ ನಿಕಟ ಪೂರ್ವ ಹಾಗೂ ಪ್ರಸ್ತುತ ಧರ್ಮಾಧ್ಯಕ್ಷರನ್ನು ವೇದಿಕೆಯಲ್ಲಿ ಸನ್ಮಾಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ನಿಕಟಪೂರ್ವ ಧರ್ಮಾಧ್ಯಕ್ಷರಾದ ಅತೀ. ವಂದನೀಯ ಲಾರೆನ್ಸ್ ಮುಕ್ಕುಯಿ, ಸಂಸ್ಥೆಯ ನಿಕಟಪೂರ್ವ ನಿರ್ದೇಶಕರಾಗಿರುವ ವಂದನೀಯ ಫಾ. ತೊಮಸ್ ಕಣ್ಣಾಂಗಲ್, ಹಾಗೂ ಪ್ರಸ್ತುತ ನಿರ್ದೇಶಕರಿಗಿರುವ ವಂದನೀಯ ಫಾ.‌ ಬಿನೋಯಿ ಎ.ಜೆ.ರವರನ್ನು ಹಾಗೂ ಸ್ವಸಹಾಯ ಸಂಘಗಳಿಂದ ಆಯ್ಕೆಯಾದ ಇಪ್ಪತ್ತೈದು ಮಂದಿ ಸಾಧಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ವಂ. ಫಾ. ರಿಚರ್ಡ್ ಪಾಯ್ಸ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕಿ ಸಿ. ನ್ಯಾನ್ಸಿ ಲೋಬೋ, ಮಾನಿನಿ ಮಹಿಳಾ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ.ಜೆ. ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಸ್ವಾಗತಿಸಿದರು.‌ ಸಭಾ ಕಾರ್ಯಕ್ರಮದ ನಂತರ ಸ್ವಸಹಾಯ ಸಂಘಗಳ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಸಿಸಿಲಿಯ ತಾವ್ರೋ ಹಾಗೂ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾರ್ಥನೆಯನ್ನು ಸೌರಭ ಸ್ವ-ಸಹಾಯ ಸಂಘದ ಸದಸ್ಯರು ನಿರ್ವಹಿಸಿದರು. ವಿವಿಧ ಸಂಘಗಳಿಂದ ಸುಮಾರು 483 ರಷ್ಟು ಮಹಿಳೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!