36.1 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಾಧಕರು

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು.

ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಬೆಳಾಲು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಆಶಾ ಸಲ್ಧಾನ, ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!