29.5 C
ಪುತ್ತೂರು, ಬೆಳ್ತಂಗಡಿ
June 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಭಾಗವತರು, ಹಿಮ್ಮೇಳದ ಗುರುಗಳಾದ ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ “ಶ್ರೇಯ” ನಿವಾಸದಲ್ಲಿ ಪ್ರದಾನಿಸಲಾಯಿತು.

ಪ್ರಶಸ್ತಿಯ ಪ್ರಾಯೋಜಕರು ಮತ್ತು ಭಾಗವತರಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದರಾದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ,ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ ಹೆಗಡೆ ಮೋಹನ ಬೈಪಾಡಿತ್ತಾಯರನ್ನು ಅಭಿನಂದಿಸಿ ಮಾತನಾಡಿದರು.

.ಕಲಾವಿದ ವಿಶ್ವನಾಥ ಕೊಯ್ಯೂರು ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತ ಮೋಹನ ಬೈಪಾಡಿತ್ತಾಯರ ಪತ್ನಿ ಶ್ರೀಮತಿ ಲಲಿತಾ ಅವರನ್ನು ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮೋಹನ ಬೈಪಾಡಿತ್ತಾಯರು ಭಾಗವತ ತೆಂಕಬೈಲು ದಿ.ತಿರುಮಲೇಶ್ವರ ಶಾಸ್ತ್ರಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡು ಪೆರ್ಲ ಯಕ್ಷ ತರಬೇತಿ ಕೇಂದ್ರದ ಕಲಾ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಸ್ಥಾಪಕ ಮತ್ತು ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕನ್ಯಾಡಿ ಯಕ್ಷಭಾರತಿ ಸಂಚಾಲಕ, ಭಾಗವತ ಮಹೇಶ ಕನ್ಯಾಡಿ ವಂದಿಸಿದರು .ಅಧ್ಯಾಪಕ ಗೋವರ್ಧನ ಎಮ್. ಮೂಡಬಿದಿರೆ , ಹಿಮ್ಮೇಳ ಕಲಾವಿದ ನಾರಾಯಣ ಶರ್ಮ ಸಹಕರಿಸಿದರು.

Related posts

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!