June 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ಇಂದಿನ ಮಹಜರು ಕಾರ್ಯ ಅಂತ್ಯ ಮಾಡಿ ವಾಪಸ್ ತೆರಳಿದ್ದಾರೆ.

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಡಿಪೋಸಿಟ್ ಫ್ರಾಂಡ್ ವಿಂಗ್ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ಸರಕಾರಿ ಪಂಚರ ಸಮ್ಮುಖದಲ್ಲಿ ಸಂಜೆ 7:45 ಗಂಟೆವರೆಗೆ ಮಹಜರು ಮಾಡಿ ವಾಪಸ್ ತೆರಳಿದ್ದು ನಾಳೆ ಮತ್ತೆ ಮಹಜರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಬೆಂಗಳೂರು ಸಿಐಡಿ ಡೆಪೋಸಿಟ್ ಫ್ರಾಂಡ್ ವಿಂಗ್ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಮಹಜರು ವೇಳೆ ಜೊತೆಯಲ್ಲಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!