24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಶಿರಸಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಯಿತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಅಂಕೋಲಾದ ದಿಗಂಬರ್ ನಾಯ್ಕ್, ಸಿದ್ದಾಪುರದ ಕುಸುಮಾಕರ್ ನಾಯ್ಕ್, ಯಲ್ಲಾಪುರದ ಮಧುಕೇಶ್ವರ ನಾಯ್ಕ್ ರವರಿಗೆ ಯಲಹಂಕ ಸಮೃದ್ಧಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ನಾರಾಯಣ ರಾಮಕೃಷ್ಣ ಕೋಮಾರ್, ಶಿರಸಿ ಮಹಾಲಕ್ಷ್ಮಿ ಮೆಮೋರಿಯಲ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಹಾಗೂ ಶಿರಸಿ ಸ್ಕ್ಯಾನ್ ಡೈಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ನ ಡೈರೆಕ್ಟರ್ ಡಾ. ದಿನೇಶ್ ಹೆಗ್ಡೆ, ಶಿವಂ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕರು ಡಾ. ಮಧುಕೇಶ್ವರ ಹೆಗ್ಡೆಯವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya
error: Content is protected !!