25.4 C
ಪುತ್ತೂರು, ಬೆಳ್ತಂಗಡಿ
September 15, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಆ.28: ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ರೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ :

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya
error: Content is protected !!