August 1, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಭಾಗವತರು, ಹಿಮ್ಮೇಳದ ಗುರುಗಳಾದ ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ “ಶ್ರೇಯ” ನಿವಾಸದಲ್ಲಿ ಪ್ರದಾನಿಸಲಾಯಿತು.

ಪ್ರಶಸ್ತಿಯ ಪ್ರಾಯೋಜಕರು ಮತ್ತು ಭಾಗವತರಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದರಾದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ,ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ ಹೆಗಡೆ ಮೋಹನ ಬೈಪಾಡಿತ್ತಾಯರನ್ನು ಅಭಿನಂದಿಸಿ ಮಾತನಾಡಿದರು.

.ಕಲಾವಿದ ವಿಶ್ವನಾಥ ಕೊಯ್ಯೂರು ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತ ಮೋಹನ ಬೈಪಾಡಿತ್ತಾಯರ ಪತ್ನಿ ಶ್ರೀಮತಿ ಲಲಿತಾ ಅವರನ್ನು ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮೋಹನ ಬೈಪಾಡಿತ್ತಾಯರು ಭಾಗವತ ತೆಂಕಬೈಲು ದಿ.ತಿರುಮಲೇಶ್ವರ ಶಾಸ್ತ್ರಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡು ಪೆರ್ಲ ಯಕ್ಷ ತರಬೇತಿ ಕೇಂದ್ರದ ಕಲಾ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಸ್ಥಾಪಕ ಮತ್ತು ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕನ್ಯಾಡಿ ಯಕ್ಷಭಾರತಿ ಸಂಚಾಲಕ, ಭಾಗವತ ಮಹೇಶ ಕನ್ಯಾಡಿ ವಂದಿಸಿದರು .ಅಧ್ಯಾಪಕ ಗೋವರ್ಧನ ಎಮ್. ಮೂಡಬಿದಿರೆ , ಹಿಮ್ಮೇಳ ಕಲಾವಿದ ನಾರಾಯಣ ಶರ್ಮ ಸಹಕರಿಸಿದರು.

Related posts

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!