36.1 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ “ಕೃಷ್ಣಾನುಗ್ರಹ ಕಲ್ಯಾಣ ಮಂಟಪ”ದಲ್ಲಿ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭದ ನಿಮಿತ್ತ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರಸಂಗ “ಕರಂಡಕಾಸುರ ವಧೆ ” ಮಾ.7ರಂದು ಪ್ರದರ್ಶನಗೊಂಡಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಶ್ರೇಯಸ್ ಪಾಳಂದೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ಪ್ರಶಾಂತ ಮುಂಡ್ಕೂರು, ಅರ್ಜುನನಾಗಿ ಹರಿಶ್ಚಂದ್ರ ಆಚಾರ್ಯ ಚಾರ್ಮಾಡಿ, ಜಗಳಗ್ರಂಥಿಯಾಗಿ ಶಶಿಕಿರಣ ಕಾವು, ಕಲುಷಗಾಮಿನಿಯಾಗಿ ಸುರೇಶ ಬಾಯಾರು, ಶುಕತುಂಡನಾಗಿ ಪ್ರಶಾಂತ್ ಪುತ್ತೂರು, ಹನುಮಂತನಾಗಿ ಚಂದ್ರಶೇಖರ ಧರ್ಮಸ್ಥಳ, ಕರಂಡಕಾಸುರನಾಗಿ ಶೀಶ ಮಣಿಲ ಪಾತ್ರ ನಿರ್ವಹಿಸಿದರು.

ಶ್ರೀಮಾತಾ ಆರ್ಟ್ಸ್ ನ ಗುರುಪ್ರಸಾದ್ ವೇಷ ಭೂಷಣದಲ್ಲಿ ಸಹಕರಿಸಿದರು. ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಸಮಿತಿಯ ವತಿಯಿಂದ ನೀಡುವ ಗೌರವವನ್ನು ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ ಸ್ವೀಕರಿಸಿದರು.

Related posts

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya
error: Content is protected !!