August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ “ಕೃಷ್ಣಾನುಗ್ರಹ ಕಲ್ಯಾಣ ಮಂಟಪ”ದಲ್ಲಿ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭದ ನಿಮಿತ್ತ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರಸಂಗ “ಕರಂಡಕಾಸುರ ವಧೆ ” ಮಾ.7ರಂದು ಪ್ರದರ್ಶನಗೊಂಡಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಶ್ರೇಯಸ್ ಪಾಳಂದೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ಪ್ರಶಾಂತ ಮುಂಡ್ಕೂರು, ಅರ್ಜುನನಾಗಿ ಹರಿಶ್ಚಂದ್ರ ಆಚಾರ್ಯ ಚಾರ್ಮಾಡಿ, ಜಗಳಗ್ರಂಥಿಯಾಗಿ ಶಶಿಕಿರಣ ಕಾವು, ಕಲುಷಗಾಮಿನಿಯಾಗಿ ಸುರೇಶ ಬಾಯಾರು, ಶುಕತುಂಡನಾಗಿ ಪ್ರಶಾಂತ್ ಪುತ್ತೂರು, ಹನುಮಂತನಾಗಿ ಚಂದ್ರಶೇಖರ ಧರ್ಮಸ್ಥಳ, ಕರಂಡಕಾಸುರನಾಗಿ ಶೀಶ ಮಣಿಲ ಪಾತ್ರ ನಿರ್ವಹಿಸಿದರು.

ಶ್ರೀಮಾತಾ ಆರ್ಟ್ಸ್ ನ ಗುರುಪ್ರಸಾದ್ ವೇಷ ಭೂಷಣದಲ್ಲಿ ಸಹಕರಿಸಿದರು. ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಸಮಿತಿಯ ವತಿಯಿಂದ ನೀಡುವ ಗೌರವವನ್ನು ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ ಸ್ವೀಕರಿಸಿದರು.

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya
error: Content is protected !!