25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

ಬೆಳ್ತಂಗಡಿ: ಕರಾವಳಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಮಾ.14 ರಂದು ಮೊದಲುಗೊಂಡು ಮಾ.19ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ವಿಜೃಂಭಣೆಯಿಂದ ನಡೆಯುತ್ತಿದೆ.

ತುಳುನಾಡಿನ ಆಚಾರ-ವಿಚಾರ ಅತ್ಯಂತ ಶ್ರೀಮಂತವಾಗಿದೆ ಆಗಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಡೆಯುವ ವರ್ಷಾವಧಿ ಜಾತ್ರೆಗೆ ನಾಡಿನ ವಿವಿಧ ಕಡೆಗಳಿಂದ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಗಂಧಪ್ರಸಾದ ಸ್ವೀಕರಿಸಿದರು. ಭಕ್ತರು ತಮ್ಮ ಸಂಕಷ್ಟ ನಿವರಾಣೆಗೆ, ಅಭಿಷ್ಟೇಗಳ ಪ್ರಾಪ್ತಿಗಾಗಿ ದೈವದ ಮುಂದೆ ಪ್ರಾರ್ಥಿಸಿದರು. ಮಲ್ಲಿಗೆ, ಸೀಯಾಳ ಸಹಿತ ಇನ್ನಿತರ ವಸ್ತುಗಳನ್ನು ಭಕ್ತರು ತಮ್ಮ ಹರಕೆ ರೂಪದಲ್ಲಿ ಪೆರಿಂಜಮಾರ ದೈವ ಕೊಡಮಣಿತ್ತಾಯಕ್ಕೆ ಅರ್ಪಿಸಿದರು. ಮಾ.೧೭ರಂದು ವರ್ಷಾವಧಿ ಜಾತ್ರೋತ್ಸವ ಅಂಗವಾಗಿ ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ ಮಧ್ಯಾಹ್ನದಿಂದ ಸಂಜೆ ತನಕ ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ವಿಜೃಂಭಣೆಯಿAದ ಜರುಗಲಿದೆ.

ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತದಾರ ಎ.ಜೀವಂಧರ ಕುಮಾರ್ ಯಾನೆ ಕಂಚಿಪೂವಣಿ ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya
error: Content is protected !!