June 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ಇಂದಿನ ಮಹಜರು ಕಾರ್ಯ ಅಂತ್ಯ ಮಾಡಿ ವಾಪಸ್ ತೆರಳಿದ್ದಾರೆ.

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಡಿಪೋಸಿಟ್ ಫ್ರಾಂಡ್ ವಿಂಗ್ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ಸರಕಾರಿ ಪಂಚರ ಸಮ್ಮುಖದಲ್ಲಿ ಸಂಜೆ 7:45 ಗಂಟೆವರೆಗೆ ಮಹಜರು ಮಾಡಿ ವಾಪಸ್ ತೆರಳಿದ್ದು ನಾಳೆ ಮತ್ತೆ ಮಹಜರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಬೆಂಗಳೂರು ಸಿಐಡಿ ಡೆಪೋಸಿಟ್ ಫ್ರಾಂಡ್ ವಿಂಗ್ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಮಹಜರು ವೇಳೆ ಜೊತೆಯಲ್ಲಿದ್ದರು.

Related posts

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya
error: Content is protected !!