May 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ಇಂದಿನ ಮಹಜರು ಕಾರ್ಯ ಅಂತ್ಯ ಮಾಡಿ ವಾಪಸ್ ತೆರಳಿದ್ದಾರೆ.

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಡಿಪೋಸಿಟ್ ಫ್ರಾಂಡ್ ವಿಂಗ್ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ಸರಕಾರಿ ಪಂಚರ ಸಮ್ಮುಖದಲ್ಲಿ ಸಂಜೆ 7:45 ಗಂಟೆವರೆಗೆ ಮಹಜರು ಮಾಡಿ ವಾಪಸ್ ತೆರಳಿದ್ದು ನಾಳೆ ಮತ್ತೆ ಮಹಜರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಬೆಂಗಳೂರು ಸಿಐಡಿ ಡೆಪೋಸಿಟ್ ಫ್ರಾಂಡ್ ವಿಂಗ್ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಮಹಜರು ವೇಳೆ ಜೊತೆಯಲ್ಲಿದ್ದರು.

Related posts

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!