33.4 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಮುಂಡ್ಕೂರಿನ ಶಶಿಧರ್, ಚಾರದ ಸಂತೋಷ್ ನಾಯ್ಕ್, ನಂದಿಕೂರಿನ ವಿದ್ಯಾನಾಥ್ ಶೆಟ್ಟಿ, ಹಜಮಾಡಿಯ ಜಗದೀಶ್ ರವರಿಗೆ ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರರು ಕೆ ವಿಜಯರಾಘವ ರಾವ್, ಭಾರತ್ ವಿಕಾಸ ಪರಿಷತ್ ನ ದಕ್ಷಿಣ ಪ್ರಾಂತ ಸಂಯೋಜಕರಾದ ಹರಿರಾಮ್ ಶೆಣೈ, ಭಾರತ್ ವಿಕಾಸ ಪರಿಷತ್ ಭಾರ್ಗವ ಶಾಖೆಯ ಕಾರ್ಯದರ್ಶಿ ಸುಬ್ರಾಯ ಶೆಣೈ, ಸೇವಾಭಾರತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ತೆಂಕಿಲ್ಲಾಯ ಹಾಗೂ ಉಡುಪಿ URW ಸರ್ವೋತ್ತಮ್ ಅಮೀನ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
error: Content is protected !!