36.7 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಾ.17ರಂದು ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.

ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನಾಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.

ನೂತನ ಅಧ್ಯಕ್ಷೆ ಅಶ್ವಿನಿ ಎ. ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ. ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್, ಚಿತ್ಪಾವನ ಸಂಘದ ಭಾರತಿ ಫಡಕೆ, ನಾರಾಯಣ ಫಡಕೆ ಶುಭ ಹಾರೈಸಿದರು.

ತಾಲೂಕು ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು. ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು. ಖಜಾಂಜಿ ಡಾ. ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

Related posts

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!