May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಾ.17ರಂದು ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.

ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನಾಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.

ನೂತನ ಅಧ್ಯಕ್ಷೆ ಅಶ್ವಿನಿ ಎ. ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ. ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್, ಚಿತ್ಪಾವನ ಸಂಘದ ಭಾರತಿ ಫಡಕೆ, ನಾರಾಯಣ ಫಡಕೆ ಶುಭ ಹಾರೈಸಿದರು.

ತಾಲೂಕು ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು. ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು. ಖಜಾಂಜಿ ಡಾ. ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!