24.6 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 30 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ನಡೆಸಿದ ಎರಡು ದಿನದ ಶೋಧ ಕಾರ್ಯಾಚರಣೆ ಅಂತ್ಯ ಮಾಡಿ ದಾಖಲೆ ಪತ್ರಗಳನ್ನು ಮಹಜರು ಮಾಡಿ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ನಗರದ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ರಾತ್ರಿ 7:45 ವರೆಗೆ ಶೋಧ ನಡೆಸಿ ಬಳಿಕ ಮಾ.18 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶೋಧ ಕಾರ್ಯಾಚರಣೆ ನಡೆಸಿ ಸೊಸೈಟಿಯಲ್ಲಿ ಗ್ರಾಹಕರಿಗೆ ಮತ್ತು ಸೊಸೈಟಿಗೆ ಸಂಬಂಧಿಸಿದ ಪ್ರಮುಖ ದಾಖಲೆ ಪತ್ರಗಳು , ಕಂಪ್ಯೂಟರಿನ ಮೂರು ಹಾರ್ಡ್ ಡಿಸ್ಕ್, ಎಸ್‌.ಎಸ್.ಡಿ, ಒಂದು ಸಿಸಿಕ್ಯಾಮಾರದ ಡಿವಿಆರ್,ಸೊಸೈಟಿಯ ಭದ್ರತಾ ಠೇವಣಿ ಇರಿಸಿರುವ 27 ಲಕ್ಷದ ಚೆಕ್, 80 ಗ್ರಾಂ ಚಿನ್ನಾಭರಣಗಳು ಸೇರಿ ಹಲವು ವಸ್ತುಗಳನ್ನು ಸರಕಾರಿ ಪಂಚರುಗಳ ಸಮ್ಮುಖದಲ್ಲಿ ಮಹಜರು ಮಾಡಿ ವಶಪಡಿಸಿಕೊಂಡು ವಾಪಸ್ ತೆರಳಿದ್ದಾರೆ.

ಬೆಂಗಳೂರು ಡೆಪಾಸಿಟ್ ಫ್ರಾಂಡ್ ವಿಂಗ್ ಸಿಐಡಿ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya
error: Content is protected !!