ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.
ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.













