May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಾ.17ರಂದು ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.

ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನಾಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.

ನೂತನ ಅಧ್ಯಕ್ಷೆ ಅಶ್ವಿನಿ ಎ. ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ. ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್, ಚಿತ್ಪಾವನ ಸಂಘದ ಭಾರತಿ ಫಡಕೆ, ನಾರಾಯಣ ಫಡಕೆ ಶುಭ ಹಾರೈಸಿದರು.

ತಾಲೂಕು ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು. ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು. ಖಜಾಂಜಿ ಡಾ. ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

Related posts

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!