26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ), ಗುರುವಾಯನಕೆರೆ ಇದರ ವತಿಯಿಂದ ಏ.26ರಂದು ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ.18ರಂದು
ನಡುಬೊಟ್ಟು ರೌದ್ರನಾಥೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವ ಪೂರ್ಣವಾಗಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಧರ್ಮದರ್ಶಿ ಡಾ. ರವಿ ಎನ್ ಅವರ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವಿಶ್ವನಾಥ್ ಎನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್ ಮೂಲ್ಯ ಅನಿಲಡೆ, ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾದ ಸೋಮಯ್ಯ ಮೂಲ್ಯ ಹನೈನಡೆ, ಶಾಂಭವಿ ಹನೈನಡೆ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ. ಎನ್, ಕೋಶಾಧಿಕಾರಿ ದಿನೇಶ್ ಮಾಲಾಡಿ, ಜೊತೆ ಕಾರ್ಯದರ್ಶಿ ಸಂದೇಶ್ ಕುಮಾರ್ ಸೇರಿದಂತೆ ತಾರನಾಥ ಹನೈನಡೆ, ದಿನೇಶ್ ಕೊಂಡೆಮಾರು, ಉಜ್ವಲ್, ಆನಂದ ಮೂಲ್ಯ, ಕೃಷ್ಣಪ್ಪ ಮೂಲ್ಯ ಬರ್ನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಘದ ವತಿಯಿಂದ ಆಯೋಜಿಸಲಾಗುತ್ತಿರುವ ಈ ಪೂಜೆ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.

Related posts

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya
error: Content is protected !!