24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!