24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya
error: Content is protected !!